ಹಸಿವು ತಡೆಯಲಾರದೆ ಕೀಟನಾಶಕ ಸೇವಿಸಿದ ಮಗು !

Update: 2019-01-07 15:36 GMT

ಭೋಪಾಲ್, ಜ. 7: ಬುಡಕಟ್ಟು ಸಮುದಾಯಕ್ಕೆ ಸೇರಿದ ಮಗುವೊಂದು ಹಸಿವು ತಡೆಯಲಾರದೆ ಕೀಟನಾಶಕ ಸೇವಿಸಿದ ದಾರುಣ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಕುರಿತು ಮಕ್ಕಳ ಹಕ್ಕು ರಕ್ಷಣೆಯ ರಾಷ್ಟ್ರೀಯ ಆಯೋಗ ತನಿಖೆ (ಎನ್‌ಸಿಪಿಸಿಆರ್)ಗೆ ಆದೇಶಿಸಿದೆ. ಈ ಘಟನೆ ಬಗ್ಗೆ ಪರಿಶೀಲನೆ ನಡೆಸಲು ತಂಡವೊಂದನ್ನು ಕಳುಹಿಸಿ ಕೊಡಲಾಗಿದೆ. ಮಗುವಿನ ವಯಸ್ಸು ಗೊತ್ತಾಗಿಲ್ಲ ಎಂದು ಎನ್‌ಸಿಪಿಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಪಡಿತರ ಅಂಗಡಿಯಲ್ಲಿ ಹಲವು ಬಾರಿ ಮನವಿ ಮಾಡಿದರೂ ಪಡಿತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಗು ಕೀಟನಾಶಕ ಸೇವಿಸಿದೆ. ಈ ಘಟನೆ ಡಿಸೆಂಬರ್ 31ರಂದು ನಡೆದಿದೆ ಎಂದು ಮೂಲಗಳು ತಿಳಿಸಿದೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅದು ತಿಳಿಸಿದೆ. ಎನ್‌ಸಿಪಿಸಿಆರ್ ತಂಡ ಶೀಘ್ರದಲ್ಲಿ ವರದಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News