ಬಹುಭಾಷಾ ಕವನಗಳ ಆಹ್ವಾನ
Update: 2019-01-07 21:37 IST
ಮಂಗಳೂರು, ಜ.7: ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಪುರಭವನದಲ್ಲಿ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ.
ಈ ಕವಿಗೋಷ್ಠಿಯಲ್ಲಿ ವಾಚಿಸಲು ಕನ್ನಡ, ತುಳು, ಕೊಂಕಣಿ, ಮರಾಠಿ, ಅರೆಭಾಷೆ, ಸಂಸ್ಕೃತ, ಮಲಯಾಳಂ, ಬ್ಯಾರಿ, ಕೊಡವ, ಹಿಂದಿ ಇತ್ಯಾದಿ ಬಹುಭಾಷೆಗಳ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸ್ವತಃ ರಚಿಸಿದ ಕವನಗಳನ್ನು ಜ.22ರೊಳಗೆ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಕಾಂಪ್ಲೆಕ್ಸ್, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸಿಕೊಡಬಹುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.