ಪ್ರವಾದಿ ನಿಂದನೆ: ಜ.11ರಂದು ಕೃಷ್ಣಾಪುರದಲ್ಲಿ ಪ್ರತಿಭಟನಾ ಸಭೆ
Update: 2019-01-07 17:54 GMT
ಕೃಷ್ಣಾಪುರ, ಜ. 7: ಮುಸ್ಮಿಂ ಐಕ್ಯತಾ ವೇದಿಕೆ ಸುರತ್ಕಲ್ ವತಿಯಿಂದ ಪ್ರವಾದಿ ಮುಹಮ್ಮದ್ (ಸ.ಅ) ರನ್ನು ನಿಂದಿಸಿದ ಅಜಿತ್ ಹನುಮಕ್ಕನವರ್ ವಿರುದ್ಧ ಜ.11ರಂದು ಸಂಜೆ 4ಕ್ಕೆ ಬೃಹತ್ ಪ್ರತಿಭಟನಾ ಸಭೆಯು ಕೃಷ್ಣಾಪುರದ ಪ್ಯಾರಡೈಸ್ ಮೈದಾನ ನಡೆಯಲಿದೆ.
ಎಂಐವಿ ಸುರತ್ಕಲ್ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಬದ್ರಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಹಿಯುದ್ದೀನ್ ಜುಮಾ ಮಸೀದಿ, ಚೊಕ್ಕಬೆಟ್ಟು ಖತೀಬ್ ಅಬ್ದುಲ್ ಅಝೀಝ್ ದಾರಿಮಿ, ಕೃಷ್ಣಾಪುರ 7ನೆ ಬ್ಲಾಕ್ ಕೇಂದ್ರ ಜುಮಾ ಮಸೀದಿಯ ಖತೀಬ್ ಫಾರೂಕ್ ಸಖಾಫಿ, ಸುರತ್ಕಲ್ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಮುಹಿನುದ್ದೀನ್ ರಝ್ವಿ ಅಲ್ ಅಮ್ಜದಿ, ಪಿಎಫ್ಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹಾಗು ಇತರರು ಈ ಸಂದರ್ಭ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.