ಫರಂಗಿಪೇಟೆ: ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
Update: 2019-01-08 12:45 GMT
ಫರಂಗಿಪೇಟೆ, ಜ. 8: ನೇತ್ರಾವತಿ ನದಿಯಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ.
ಮೃತ ಬಾಲಕನನ್ನು ಅಮೆಮಾರ್ ನಿವಾಸಿ ಬಶೀರ್ ಎಂಬವರ ಪುತ್ರ ಸತ್ತಾರ್ (14) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.