ಕಾರವಾರ: ಪ್ರತಿಭಟನೆ ನಡೆಸಿದ ಸಿಐಟಿಯು ಕಾರ್ಯಕರ್ತರ ಬಂಧನ

Update: 2019-01-09 09:18 GMT

ಕಾರವಾರ, ಜ. 9: ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ ತಡೆದು ಪ್ರತಿಭಟನಾ ನಡೆಸಿದ ಸಿಐಟಿಯು ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರವಾರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಇಂದು ಮುಂಜಾನೆಯಿಂದ ಬಸ್ ಸಂಚಾರ ತಡೆದು ಪ್ರತಿಭಟನೆ ಮಾಡುತ್ತಿದ್ದ ಸಿಐಟಿಯು ಕಾರ್ಯಕರ್ತರನ್ನು ಪೊಲೀಸರು ಮನ ಒಲಿಸಲು ಪ್ರಯತ್ನಿಸಿದರೂ ಸಂಚಾರಕ್ಕೆ ಅನುವು ಮಾಡಿಕೊಡದ ಹಿನ್ನಲೆಯಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಯಮುನಾ ಗಾಂವ್ಕರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕಾರ್ಯಕರ್ತ ರನ್ನು ಕಾರವಾರ ನಗರ ಪೊಲೀಸರು ಬಂಧಿಸಿದ್ದಾರೆ. ನಂತರ ಜಿಲ್ಲೆಯ ವಿವಿಧ ಕಡೆ ಬಸ್ ತೆರಳಲು ಅನುವು ಮಾಡಿಕೊಡಲಾಯಿತು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News