ಹಾರ್ದಿಕ್ ಪಾಂಡ್ಯಾ, ಕೆ.ಎಲ್. ರಾಹುಲ್ ಗೆ ಬಿಸಿಸಿಐ ಶೋಕಾಸ್ ನೋಟಿಸ್
Update: 2019-01-09 10:57 GMT
ಸಿಡ್ನಿ, ಜ.9: ‘ಕಾಫಿ ವಿತ್ ಕರಣ್’ ಶೋನಲ್ಲಿ ಮಹಿಳೆಯರ ಕುರಿತು ಕಾಮೆಂಟ್ ಮಾಡಿ ವಿವಾದಕ್ಕೀಡಾಗಿರುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಾ ಮತ್ತು ಕೆ.ಎಲ್. ರಾಹುಲ್ ಗೆ ಬಿಸಿಸಿಐ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಶೋದಲ್ಲಿ ಮಹಿಳೆಯರ ಕುರಿತು ಪಾಂಡ್ಯಾ ಲಿಂಗ ತಾರತಮ್ಯದ ಹೇಳಿಕೆ ನೀಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆನಂತರ ಅವರು ಈ ವಿಚಾರಕ್ಕೆ ಸಂಬಂಧಿಸಿ ಕ್ಷಮೆ ಯಾಚಿಸಿದ್ದಾರೆ.
“ನಾವು ಕೆ.ಎಲ್. ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯಾಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದೇವೆ. ಈ ಬಗ್ಗೆ ವಿವರಣೆ ನೀಡಲು ಅವರಿಗೆ 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ” ಬಿಸಿಸಿಐನ ವಿನೋದ್ ರೈ ಹೇಳಿದ್ದಾರೆ.