ಕೇಜ್ರಿವಾಲ್‌ರನ್ನು ಭೇಟಿಯಾದ ಪ್ರಕಾಶ್ ರೈ

Update: 2019-01-10 15:11 GMT

ಹೊಸದಿಲ್ಲಿ,ಜ.10: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಈಗಾಗಲೇ ಪ್ರಕಟಿಸಿರುವ ನಟ ಪ್ರಕಾಶ್ ರೈ ಅವರು ಗುರುವಾರ ಇಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳ ಕುರಿತು ಚರ್ಚಿಸಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಕಾಶ ಕಳೆದ ವಾರ ತಿಳಿಸಿದ್ದರು.

ಕೇಜ್ರಿವಾಲ್‌ರನ್ನು ಭೇಟಿಯಾಗಿ ತನ್ನ ರಾಜಕೀಯ ಪಯಣಕ್ಕೆ ಆಪ್ ಬೆಂಬಲವನ್ನು ಕೋರಿದ್ದೇನೆ ಎಂದು ಅವರು ಟ್ವೀಟಿಸಿದ್ದಾರೆ.

ಕೇಜ್ರಿವಾಲ್ ನೇತೃತ್ವದ ಆಪ್ ಪ್ರಕಾಶ್‌ ರೈ ಬೆಂಬಲವನ್ನು ವ್ಯಕ್ತಪಡಿಸಿದ್ದು,ಎಲ್ಲ ಒಳ್ಳೆಯ ಜನರು ರಾಜಕೀಯಕ್ಕೆ ಬರಬೇಕು ಎಂದು ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News