ದ.ಕ ಅಲ್ಪಸಂಖ್ಯಾತರ ನಿಯೋಗದಿಂದ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರ ಭೇಟಿ

Update: 2019-01-10 17:14 GMT

ಬೆಂಗಳೂರು,ಜ.10: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರಾದ ವೈ. ಸೈಯದ್ ಅಹ್ಮದ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ನಿಯೋಗವು ಕೆಪಿಸಿಸಿ ಅಲ್ಪಸಂಖ್ಯಾತರ ಸಮಿತಿಯ ಸಂಯೋಜಕರಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರ ನೇತೃತ್ವದಲ್ಲಿ ಭೇಟಿ ಮಾಡಿತು.

ಇತ್ತೀಚೆಗೆ ಸುವರ್ಣ ನ್ಯೂಸ್ ಚಾನೆಲ್ ನ ನಿರೂಪಕ ಅಜಿತ್ ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದು, ಈ ಬಗ್ಗೆ ಹಲವಾರು ದೂರುಗಳು ದಾಖಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಅಲ್ಪಸಂಖ್ಯಾತರ ಮನಸ್ಸಿಗೆ ತೀವ್ರ ನೋವಾಗಿದ್ದು ಈ ಬಗ್ಗೆ ಸರಕಾರ ಕೂಡಲೇ ಸೂಕ್ತ ಕ್ರಮ ಜರುಗಿಸುವ ಬಗ್ಗೆ ಒತ್ತಡ ಹೇರುವಂತೆ ಅಧ್ಯಕ್ಷರಲ್ಲಿ ಒತ್ತಾಯಿಸಲಾಯಿತು.

ನಿಯೋಗದಲ್ಲಿ ಅಲ್ಪಸಂಖ್ಯಾತರ ಮುಖಂಡರಾದ ಸಾಲ್ಮರ ಮಹಮ್ಮದ್ ಶರೀಫ್, ಉಮರಬ್ಬ ಮುಲಾರ್, ಅಝರುದ್ದೀನ್ ಅತ್ತಿಕೆರೆ, ರಝಾಕ್ ಪಾಣಾಜೆ, ಮತ್ತು ಮಹಮ್ಮದ್ ಕುಂಞಿ ದೇಲಂಪಾಡಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News