ಶಿವಮೊಗ್ಗ: ಲಾಡ್ಜ್ ನಲ್ಲಿ ಬಸ್ ಚಾಲಕ ಆತ್ಮಹತ್ಯೆ

Update: 2019-01-10 18:39 GMT

ಶಿವಮೊಗ್ಗ, ಜ. 10: ಲಾಡ್ಜ್‍ವೊಂದರ ಕೊಠಡಿಯಲ್ಲಿ ಖಾಸಗಿ ಬಸ್ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು ಮೂಡಬಾಗಿಲು ಗ್ರಾಮದ ನಿವಾಸಿ, ಅಶೋಕ್ (32) ಆತ್ಮಹತ್ಯೆಗೆ ಶರಣಾದ ಚಾಲಕ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News