ವಿಟ್ಲ: ಅಪಘಾತದ ಗಾಯಾಳು ಕಾಶಿಮಠದ ಯುವಕ ಮೃತ್ಯು

Update: 2019-01-11 10:05 GMT

ಬಂಟ್ವಾಳ, ಜ.11: ರಸ್ತೆ ಅಪಘಾತದಲ್ಲಿ ಗಂಭಿರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾಶಿಮಠ ನಿವಾಸಿ ಯತೀಶ್(30) ಮೃತ ಯುವಕ. ಯತೀಶ್ ಡಿ.31ರ ರಾತ್ರಿ ವಿಟ್ಲದಿಂದ ಮಂಗಲಪದವಿಗೆ ತನ್ನ ಬೈಕಿನಲ್ಲಿ ಹೋಗುತ್ತಿದ್ದಾಗ ಒಟ್ಟೆಶಾಂತಿ ರಸ್ತೆ ತಿರುವಿನಲ್ಲಿ ಬೈಕ್ ಅಪಘಾತಕ್ಕೀಡಾಗಿತ್ತು. ಇದರಿಂದ ಗಂಭೀರ ಗಾಯಗೊಂಡ ಯತೀಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರಿಂದು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಯತೀಶ್ ಬಹರೈನ್‌ನ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಗಷ್ಟೆ 2 ತಿಂಗಳ ರಜೆಯಲ್ಲಿ ಊರಿಗೆ ಆಗಮಿಸಿದ್ದರು.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News