ಕಾಲೇಜು ಮಂಜೂರಾತಿಗೆ ಒತ್ತಾಯಿಸಿ ರಕ್ತದಲ್ಲಿ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದ ಯುವಕ

Update: 2019-01-11 16:59 GMT

ವಿಜಯಪುರ,ಜ.11: ಜಿಲ್ಲೆಯ ನಾಲವತವಾಡ ಪಟ್ಟಣಕ್ಕೆ ಸರಕಾರಿ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಯುವಕನೋರ್ವ ಸಿಎಂ‌ ಕುಮಾರಸ್ವಾಮಿ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ, ಜಿಲ್ಲಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಸರಕಾರಿ ಕಾಲೇಜು ಆರಂಭಿಸುವಂತೆ ಸಂಜೀವಕುಮಾರ್ ಜೋಶಿ‌ ಎಂಬ ಯುವಕ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಈ ಮೊದಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದರೂ ಕೂಡಾ ಯಾವುದೇ ಸ್ಪಂದನೆ ದೊರಕದ ಕಾರಣ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News