ಶಿವಮೊಗ್ಗ: ಕಾನೂನುಬಾಹಿರ ದಾಸ್ತಾನು ಮಾಡಿದ್ದ ಮರಳು ವಶ

Update: 2019-01-12 11:28 GMT

ಶಿವಮೊಗ್ಗ, ಜ.12: ಯಾವುದೇ ಪರವಾನಿಗೆಯಿಲ್ಲದೆ ಕಾನೂನುಬಾಹಿರವಾಗಿ ಮರಳು ದಾಸ್ತಾನು ಮಾಡಿದ್ದ ಅಡಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿ, ಸುಮಾರು 50 ಸಾವಿರ ರೂ. ಮೌಲ್ಯದ ಮರಳನ್ನು ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.

ತ್ರಿಯಂಬಕಪುರ ಗ್ರಾಮದ ಕೃಷ್ಣಮೂರ್ತಿ ಎಂಬವರಿಗೆ ಸೇರಿದ ಅಡಕೆ ತೋಟದಲ್ಲಿ ಈ ಮರಳು ದಾಸ್ತಾನು ಮಾಡಲಾಗಿತ್ತು. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. 9 ರಿಂದ 10 ಟ್ರ್ಯಾಕ್ಟರ್ ಲೋಡ್ ಮರಳನ್ನು ವಶಕ್ಕೆ ಪಡೆದಿದ್ದು, ಇದರ ಮೌಲ್ಯ 50 ಸಾವಿರ ರೂ.ಗಳೆಂದು ಅಂದಾಜಿಸಲಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News