ಬೆಂಗಳೂರು: ಲಾರಿ ಹರಿದು ಬ್ಯಾಂಕ್ ಉದ್ಯೋಗಿ ಮೃತ್ಯು

Update: 2019-01-12 14:05 GMT

ಬೆಂಗಳೂರು, ಜ.12: ಸಿಮೆಂಟ್ ಮಿಕ್ಸರ್ ಲಾರಿ ಹರಿದು ಬ್ಯಾಂಕ್‌ಗೆ ಹೋಗುತ್ತಿದ್ದ ಉದ್ಯೋಗಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಇಲ್ಲಿನ ಇಬ್ಬಲೂರು ಜಂಕ್ಷನ್‌ನಲ್ಲಿ ನಡೆದಿದೆ ಎನ್ನಲಾಗಿದೆ.

ನಗರದ ಇಬ್ಬಲೂರಿನ ದೊಡ್ಡ ಮುನಿಯಪ್ಪ(58) ಮೃತಪಟ್ಟವರು ಎಂದು ತಿಳಿದುಬಂದಿದೆ.

ಶನಿವಾರ ಬೆಳಗ್ಗೆ 9:30ರ ವೇಳೆ ಹತ್ತಿರದ ಬ್ಯಾಂಕಿಗೆ ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಮುನಿಯಪ್ಪ ಅವರ ಮೇಲೆ ಸಿಮೆಂಟ್ ಮಿಕ್ಸರ್ ಲಾರಿ ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News