ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಮೃತ್ಯು

Update: 2019-01-12 14:15 GMT

ಬಂಟ್ವಾಳ, ಜ. 12: ವ್ಯಕ್ತಿಯೊಬ್ಬರು ನೇತ್ರಾವತಿ ನದಿನೀರಿಗೆ ಬಿದ್ದು ಮೃತಪಟ್ಟ ಘಟನೆ ಜಕ್ರಿಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ.

ಬಂಟ್ವಾಳ ಕಸ್ಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿಯ ನಿವಾಸಿ ಸುಂದರ ಮೂಲ್ಯ (65) ಮೃತರು ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದ ಸಹಾಯದಿಂದ ಊರವರ ನೆರವಿನಿಂದ ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಸುಂದರ ಅವರು ಬಂಟ್ವಾಳದಲ್ಲಿ ಅಂಗಡಿ ನಡೆಸುತ್ತಿದ್ದು, ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News