ಪುತ್ತೂರು: ಛತ್ರಪತಿ ಶಿವಾಜಿ ವಂಶಸ್ಥ ಚೌಹಾಣ್ ದಾಫ್ಲೆ ಬಿಜೆಪಿ ಕಚೇರಿಗೆ ಭೇಟಿ

Update: 2019-01-12 16:57 GMT

ಪುತ್ತೂರು, ಜ. 12: ಛತ್ರಪತಿ ಶಿವಾಜಿ ಮಹಾರಾಜ್‍ರವರ 13ನೇ ವಂಶಸ್ಥ ರಂಜಿತ್ ಸಿಂಹ ಬಾಳಾ ಸಾಹೇಬ್ ಚೌಹಾಣ್ ದಾಫ್ಲೆ ಶನಿವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಚೌಹಾಣ್‍ ರನ್ನು ಬಿಜೆಪಿ ಪುತ್ತೂರು ಮಂಡಲದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮತ್ತು ನಗರ ಮಂಡಲದ ಅಧ್ಯಕ್ಷ ಜೀವಂದರ್ ಜೈನ್‍ ಶಾಲು ಹೊದಿಸಿ, ಪೇಟಾ ತೊಡಿಸಿ, ಮಾಲಾರ್ಪಣೆ ಮಾಡಿ ಗೌರವಿಸಿದರು.

ಬಳಿಕ ಮಾತನಾಡಿದ ಚೌಹಾಣ್ ಅವರು ಮಹಾರಾಜ್ ಶಿವಾಜಿಯವರ ಜೀವನ, ಹೋರಾಟ, ಸಾಮ್ರಾಜ್ಯ ಸ್ಥಾಪನೆಗಳ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಉದ್ಯಮಿ ವಾಮನ ಪೈ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಬಜತ್ತೂರು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ರಾಮದಾಸ್ ಹಾರಾಡಿ, ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯೀ ಸಮಿತಿಯ ಅಧ್ಯಕ್ಷರಾದ ಹರೀಶ್ ಬಿಜತ್ರೆ, ಜಿಲ್ಲಾ ಸಮಿತಿ ಸದಸ್ಯರಾದ ಚಂದ್ರಶೇಖರ ರಾವ್ ಬಪ್ಪಳಿಗೆ, ತಾಲೂಕು ಪಂಚಾಯತ್ ಸದಸ್ಯರಾದ ಸುಜಾತ ಕೃಷ್ಣ, ಎ.ಪಿ.ಎಂ.ಸಿ. ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ನಗರಸಭಾ ಸದಸ್ಯರಾದ ಸಂತೋಷ್ ಕುಮಾರ್ ಬೊಳ್ವಾರು, ನವೀನ್ ಕುಮಾರ್ ಪೆರಿಯತ್ತೋಡಿ, ಪ್ರೇಂ ಕುಮಾರ್, ಲೀಲಾವತಿ, ಎ.ಪಿ.ಎಂ.ಸಿ ಸದಸ್ಯರಾದ ಮಂಜುನಾಥ್. ಎನ್.ಎಸ್., ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಗ್ರಾಮಾಂತರ ಯುವಮೋರ್ಚಾದ ಅಧ್ಯಕ್ಷರಾದ ಸುನೀಲ್ ದಡ್ಡು, ಬಿಜೆಪಿ ನಗರ ಮಂಡಲ ಯುವಮೋರ್ಚಾದ ಅಧ್ಯಕ್ಷ ಅನೀಶ್ ಬಡೆಕ್ಕಿಲ, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನಗರ ಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ, ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಅರಿಯಡ್ಕ ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಲೋಕೇಶ್ ಚಾಕೋಟೆ, ಕುಂಬ್ರ ಪ್ರಾ.ಕೃ. ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಒಳಮೊಗ್ರು ಪಂಚಾಯತ್ ಸಮಿತಿ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಪ್ರಧಾನ ಕಾರ್ಯದರ್ಶಿ ಸುಧಾಕರ ಆಳ್ವ, ಪೂವಪ್ಪ ನಾಯ್ಕ್, ಮಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿ ಯಶಸ್ವಿನಿ ಶಾಸ್ತ್ರಿ, ಬಾಲಕೃಷ್ಣ ಪಡ್ಡಾಯೂರು, ಜಯಂತ ಶೆಟ್ಟಿ ಕಂಬಳದಡ್ಡ, ದಿನೇಶ್ ಜೈನ್, ಅಶೋಕ್ ಬಲ್ನಾಡು, ಅರಿಯಡ್ಕ ಮಹಿಳಾ ಮೋರ್ಛಾದ ಚಿತ್ರಲೇಖ ರೈ, ವೆಂಕಪ್ಪ ಗೌಡ ಕೆಯ್ಯೂರು, ಬಿಜೆಪಿ ಕಚೇರಿ ಕಾರ್ಯದರ್ಶಿ ರುಕ್ಮಯ್ಯ ಇದ್ಪಾಡಿ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಡಿ. ಶಂಭು ಭಟ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News