ಅಸ್ಸಾಂ: ಬಿಜೆಪಿ ಮುಖಂಡನ ಬೆದರಿಕೆ ಹಿನ್ನೆಲೆ: ವಿವಿ ಆವರಣದಲ್ಲಿ ಪ್ರತಿಭಟನೆಗೆ ನಿಷೇಧ
Update: 2019-01-12 17:05 GMT
ಗುವಾಹಟಿ, ಜ.12: ಪೂರ್ವಾನುಮತಿಯಿಲ್ಲದೆ ವಿಶ್ವವಿದ್ಯಾನಿಲಯದ ಆವರಣದೊಳಗೆ ಪ್ರತಿಭಟನೆ ನಡೆಸುವುದನ್ನು ಅಸ್ಸಾಂ ವಿವಿಯ ಅಧಿಕಾರಿಗಳು ನಿಷೇಧಿಸಿದ್ದಾರೆ.
ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳಿಗೆ ವಿವಿಯ ಒಳಗಡೆ ಪ್ರವೇಶಿಸಲು ಬಿಡಬಾರದು ಎಂದು ಬಿಜೆಪಿ ಮುಖಂಡ ಪ್ರದೀಪ್ ದತ್ತಾ ಎಚ್ಚರಿಕೆ ನೀಡಿದ ಮರುದಿನ ವಿವಿ ಈ ಕ್ರಮ ಕೈಗೊಂಡಿದೆ. ಈ ಮಧ್ಯೆ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಶನಿವಾರವೂ ಮುಂದುವರಿದಿದೆ. ಅಧಿಕಾರಿಗಳ ಪೂರ್ವಾನುಮತಿ ಪಡೆಯದೆ ವಿವಿಯ ಆವರಣದಲ್ಲಿ ಯಾವುದೇ ರೀತಿಯ ಧರಣಿ ಮುಷ್ಕರ ಅಥವಾ ರ್ಯಾಲಿ ನಡೆಸುವುದನ್ನು ಮುಂದಿನ ಆದೇಶದವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಸ್ಸಾಂ ವಿವಿಯ ರಿಜಿಸ್ಟ್ರಾರ್ ಡಾ ಸಂಜೀಬ್ ಭಟ್ಟಾಚಾರ್ಜಿ ಸೂಚಿಸಿದ್ದಾರೆ.
ಈ ಆದೇಶ ತಕ್ಷಣದಿಂದ ಜಾರಿಗೆ ಬರುತ್ತಿದ್ದು ಇದನ್ನು ಉಲ್ಲಂಘಿಸುವವರ ವಿರುದ್ಧ ವಿವಿಯ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.