ಪ್ರಧಾನಿ ಮೋದಿ ಘನತೆಗೆ ತಕ್ಕಂತೆ ಮಾತನಾಡಬೇಕು: 'ಕ್ಲರ್ಕ್' ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

Update: 2019-01-13 16:31 GMT

ಮೈಸೂರು,ಜ.13: ಪ್ರಧಾನಿ ನರೇಂದ್ರ ಮೋದಿ ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನಿಡಿದರು.

ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಕ್ಲರ್ಕ್ ಎಂದು ಅವರಿಗೆ ಹೇಳಿದವರು ಯಾರು? ನಾನು ಕ್ಲರ್ಕೊ,  ಅಲ್ಲವೋ ಎಂದು ನಮ್ಮ ಸಚಿವ ಸಂಪುಟಕ್ಕೆ ಗೊತ್ತು. ಮೋದಿ ಯಾರು ಈ ಹೇಳಿಕೆ ನೀಡಲು ಎಂದ ಅವರು, ನಮ್ಮ ಮೇಲಿನ ಭಯದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಇದು ಅವರ ಘನತೆಗೆ ತಕ್ಕದಲ್ಲ, ಒಬ್ಬ ಪ್ರಧಾನಿ ಈ ರೀತಿ ಕೀಳುಮಟ್ಟದಲ್ಲಿ ಮಾತನಾಡಬಾರದು ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸುವ ದೃಷ್ಟಿಯಿಂದ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮೈಸೂರು ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಬೇಕು ಎಂಬ ಬೇಡಿಕೆ ಇದೆ. ಈ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ತೀರ್ಮಾನ ಮಾಡಿಲ್ಲ. ಮುಂದಿನ ದಿನಗಳಲ್ಲಿ ಸಭೆ ಕರೆದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News