ಕೆಆರ್‍ಎಸ್‍ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ಮುಂದಾದರೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಎಚ್ಚರಿಕೆ

Update: 2019-01-13 16:35 GMT

ಮೈಸೂರು,13: ರಾಜ್ಯ ಸರ್ಕಾರ ಕೆಆರ್‍ಎಸ್‍ನಲ್ಲಿ ಡಿಸ್ನಿಲ್ಯಾಂಡ್ ಯೋಜನೆ ನಿರ್ಮಾಣ ಮಾಡಲು ಮುಂದಾಗಿದ್ದು ಅದನ್ನು ಕೈಬಿಡದಿದ್ದರೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುವುದು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ನಗರದ ರೈಲ್ವೆ ನಿಲ್ದಾಣದ ಬಳಿ ರವಿವಾರ ತಮಟೆ ಚಳುವಳಿ ನಡೆಸಿ ಪ್ರತಿಭಟನೆ ನಡೆಸಿದ ಅವರು, ಡಿಸ್ನಿಲ್ಯಾಂಡ್ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಕೆಆರ್‍ಎಸ್ ಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಡಿಸ್ನಿಲ್ಯಾಂಡ್ ಮತ್ತು ಬೃಹತ್ ಪ್ರತಿಮೆಯಿಂದ ಕೆಆರ್‍ಎಸ್ ಜಲಾಶಯಕ್ಕೆ ಧಕ್ಕೆ ಆಗುವುದರ ಜೊತೆಗೆ ಕೋಟ್ಯಾಂತರ ಜನರ ಭಾವನೆಗಳಿಗೆ ನೋವಾಗಿದೆ. ಯಾವುದೇ ಕಾರಣಕ್ಕೂ ಯೋಜನೆ ಅನುಷ್ಠಾನ ಆಗಬಾರದು ಎಂದು ಹೇಳಿದರು. ಒಂದು ವೇಳೆ ಜನರ ವಿರೋಧದ ನಡುವೆಯೂ ಯೋಜನೆ ಜಾರಿಗೆ ಮುಂದಾದರೆ ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ನಡಸಲಾಗುವುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮೂಗೂರು ನಂಜುಂಡಸ್ವಾಮಿ, ಚಂದ್ರು, ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News