ಪುತ್ತೂರು : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Update: 2019-01-13 16:55 GMT

ಪುತ್ತೂರು, ಜ. 13: ತಾಲೂಕಿನ ಮಾಡ್ನೂರು ಗ್ರಾಮದ ಪೂವಂದೂರು ಎಂಬಲ್ಲಿಂದ ವಾರದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಅದೇ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿದೆ. 

ಮಾಡ್ನೂರು ಗ್ರಾಮದ ಪೂವಂದೂರು ನಿವಾಸಿ ಮುದ್ದ (58) ಮೃತಪಟ್ಟವರು.

ಮುದ್ದ ಅವರು ಕಳೆದ ಜ. 5 ರಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆ ಮಂದಿ ಸೇರಿಕೊಂಡು ಹುಡುಕಾಡಿದರೂ ಪ್ರಯೋಜನಕಾರಿಯಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಅವರ ಮನೆಯವರು ಸಂಪ್ಯ ಠಾಣೆಗೆ ನಾಪತ್ತೆ ದೂರು ನೀಡಿದ್ದರು. 

ಮುದ್ದ ಅವರ ಮೃತದೇಹ ರವಿವಾರ ಮಾಡ್ನೂರು ಗ್ರಾಮದ ಚಾಕೋಟೆ ಎಂಬಲ್ಲಿನ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. 

ಈ ಬಗ್ಗೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News