ಕೋಟೆಪುರ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
Update: 2019-01-13 17:17 GMT
ಉಳ್ಳಾಲ, ಜ. 13: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಶವವಾಗಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ನಡೆದಿದೆ.
ಉಳ್ಳಾಲ ಅರಸುನಗರದ ದಿನೇಶ್ (41) ಎಂಬವರ ಮೃತದೇಹ ರವಿವಾರ ಪತ್ತೆಯಾಗಿದೆ. ಮುಡಿಪು ಸಮೀಪದ ಐಟಿ ಕಂಪೆನಿಯಲ್ಲಿ ಗಾರ್ಡನ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಬಳಿಕ ಅವರ ಶವವು ಕೋಟೆಪುರ ಬಳಿ ಪತ್ತೆಯಾಯಿತು. ದಿನೇಶ್ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.