ಹುಬ್ಬಳ್ಳಿ: ಪಾರ್ಕಿಂಗ್ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

Update: 2019-01-14 13:22 GMT

ಹುಬ್ಬಳ್ಳಿ, ಜ.14: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಪರಿಣಾಮ ಯುವಕ‌ ಮೃತಪಟ್ಟಿರುವ ಘಟನೆ ರವಿವಾರ ರಾತ್ರಿ ನಡೆದಿದೆ.

ಕೇಶ್ವಾಪುರದ ಆಜಾದ್ ಕಾಲೋನಿಯ ಉತ್ತಮ್ ಬೋಂಗಾಳೆ (27) ಮೃತ ಯುವಕ. ನಗರದ ಗದಗ ರಸ್ತೆಯ ರೈಲ್ವೆ ಗ್ರೌಂಡ್ ಬಳಿ ಬೈಕ್ ಪಾರ್ಕಿಂಗ್ ಮಾಡುವ ವಿಚಾರವಾಗಿ ಗಲಾಟೆಯಾಗಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ ಐದಾರು ಜನರ ಗುಂಪು ಉತ್ತಮ್ ಗೆ ಚಾಕುವಿನಿಂದ ಇರಿದಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಉತ್ತಮ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದಾನೆ.‌ ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News