ಪಂಡಿತ್ ರಾಜೀವ್ ತಾರಾನಾಥ್ ರಿಗೆ 'ರಾಜ್ಯ ವಿದ್ವಾನ್ ಪ್ರಶಸ್ತಿ' ಪ್ರದಾನ

Update: 2019-01-14 16:18 GMT
ಪಂಡಿತ್ ರಾಜೀವ್ ತಾರಾನಾಥ್

ಮೈಸೂರು,ಜ.14: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ರಾಜ್ಯ ಸರ್ಕಾರದ ಪ್ರತಿಷ್ಠಿತ 'ರಾಜ್ಯ ವಿದ್ವಾನ್ ಪ್ರಶಸ್ತಿ' ಯನ್ನು ಖ್ಯಾತ ಅಂತರಾಷ್ಟ್ರೀಯ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ನೀಡಿ ಗೌರವಿಸಲಾಯಿತು.

ನಗರದ ಕಲಾಮಂದಿರದ ಕಿಂದರ ಜೋಗಿ ವೇದಿಕೆಯಲ್ಲಿ ಸೋಮವಾರ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಸನ್ಮಾನಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಪೊಲೀಸ್ ಆಯುಕ್ತ ಸಿ.ಚಂದ್ರಶೇಖರ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ರಂಗಾಯಣ ನಿದೇಶಕಿ ಭಾಗೀರಥಿ ಬಾಯಿ ಕದಂ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News