ಪ್ರಯಾಗ್‌ರಾಜ್: ಕುಂಭಮೇಳ ಶಿಬಿರದಲ್ಲಿ ಬೆಂಕಿ ಅವಘಡ

Update: 2019-01-14 18:47 GMT

ಅಲಹಾಬಾದ್, ಜ.14: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ಆರಂಭದ ಮುನ್ನಾದಿನವಾದ ಸೋಮವಾರ ಶಿಬಿರದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ದಿಗಂಬರ ಆಖಾಡದ ಶಿಬಿರದಲ್ಲಿ ಸಿಲಿಂಡರ್ ಸ್ಫೋಟಿಸಿದ ಕಾರಣ ಶಿಬಿರಕ್ಕೆ ಬೆಂಕಿ ತಗಲಿದ್ದು ಶೀಘ್ರದಲ್ಲೇ ಹಲವು ಶಿಬಿರಗಳಿಗೆ ವ್ಯಾಪಿಸಿದೆ. ಶಿಬಿರದ ಸ್ಥಳದಲ್ಲಿದ್ದ ಎರಡು ದ್ವಿಚಕ್ರ ವಾಹನ ಹಾಗೂ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ 6 ಅಗ್ನಿಶಾಮಕ ವಾಹನ ಹಾಗೂ 8 ಆ್ಯಂಬುಲೆನ್ಸ್‌ಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿವೆ . ಘಟನೆಯಲ್ಲಿ ಹೆಚ್ಚಿನ ಅನಾಹುತವಾಗಿಲ್ಲ ಎಂದು ಪೊಲೀಸ್ ಅಧೀಕ್ಷಕ ಸಂಗಮ್ ಪೂರ್ಣೇಂದು ಸಿಂಗ್ ತಿಳಿಸಿದ್ದಾರೆ.

12 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜ.15ರಿಂದ ಆರಂಭವಾಗಿ 50 ದಿನ ನಡೆಯಲಿದ್ದು 2 ಕೋಟಿಗೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News