ಬಿಜೆಪಿಗೆ ಪಕ್ಷೇತರ ಶಾಸಕರ ಬೆಂಬಲದಿಂದ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಪರಮೇಶ್ವರ್

Update: 2019-01-15 13:35 GMT

ಬೆಂಗಳೂರು, ಜ.15: ಪಕ್ಷೇತರ ಶಾಸಕರಾದ ಆರ್.ಶಂಕರ್ ಹಾಗೂ ಎಚ್.ನಾಗೇಶ್ ಯಾಕೆ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದಾರೆ ಎಂದು ಗೊತ್ತಿಲ್ಲ. ಈ ಇಬ್ಬರು ಶಾಸಕರು ಬಿಜೆಪಿಗೆ ಸಹಕಾರ ಕೊಡುತ್ತೇವೆ ಎಂದಿದ್ದಾರೆ, ಇದರಿಂದ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. 

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಶಾಸಕರು ತಮ್ಮ ಬೆಂಬಲವನ್ನು ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಕೊಡಲ್ಲ, ಬಿಜೆಪಿಗೆ ನೀಡುತ್ತೇವೆ ಎಂದು ರಾಜ್ಯಪಾಲರಿಗೆ ಪತ್ರ ರವಾನಿಸಿದ್ದಾರೆ. ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡುವುದಾದರೇ ನೀಡಲಿ. ನಮ್ಮದೇನು ಅಭ್ಯಂತರ ಇಲ್ಲ. ಬಿಜೆಪಿಗೆ ಅಧಿಕಾರದ ಆಸೆ, ಆಮಿಷವೊಡ್ಡಿ ಸರಕಾರವನ್ನ ಪತನಗೊಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ನಮ್ಮ ಸರಕಾರವನ್ನು ಬೀಳಿಸಲು ಹೇಗೆಲ್ಲಾ ನಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಇಡೀ ದೇಶಕ್ಕೇ ಗೊತ್ತಿದೆ. ನಮ್ಮ ಸರಕಾರವಂತೂ ಅಸ್ಥಿರ ಆಗೋದಿಲ್ಲ, ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಬೆಲೆ ಇದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News