ಆಪರೇಷನ್ ಪದ್ಧತಿ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ ಸಚಿವ ಎಸ್.ಆರ್.ಪಾಟೀಲ್

Update: 2019-01-15 14:30 GMT

ಬಾಗಲಕೋಟೆ, ಜ.15: ಆಪರೇಷನ್ ಕಮಲಕ್ಕೆ ನೈಜ ಕಾಂಗ್ರೆಸ್ಸಿಗರು ಯಾರೂ ಬಲಿಯಾಗುವುದಿಲ್ಲ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತೇನೆಂಬ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರು ಯಾರೂ ಬಿಜೆಪಿಗೆ ಹೋಗುವುದಿಲ್ಲ. ಆಪರೇಷನ್ ಪದ್ಧತಿ ಪ್ರಜಾಪ್ರಭುತ್ವದ ಕಗ್ಗೊಲೆ. 50 ಕೋಟಿ, 100 ಕೋಟಿ ಎಂಬ ಕುದುರೆ ವ್ಯಾಪಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ತಿಳಿಸಿದ್ದಾರೆ. ಆಪರೇಷನ್ ಕಮಲ ಎನ್ನುವುದೇ ಒಂದು ಪ್ಲಾಪ್ ಶೋ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News