ಬಿಜೆಪಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ನಾಯಕರು ಸಿದ್ಧ: ಸಚಿವ ಸತೀಶ್ ಜಾರಕಿಹೊಳಿ

Update: 2019-01-15 14:34 GMT

ಬೆಳಗಾವಿ, ಜ.15: ಬಿಜೆಪಿಗೆ ಸರಕಾರ ರಚಿಸುವಷ್ಟು ಸಂಖ್ಯಾಬಲ ಯಾವುದೆ ಕಾರಣಕ್ಕೂ ಸಿಗುವುದಿಲ್ಲ. ಆದಾಗ್ಯು, ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಮತ್ತೊಂದು ವಿಫಲ ಪ್ರಯತ್ನಕ್ಕೆ ಕೈ ಹಾಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದಿಬ್ಬರು ಅತೃಪ್ತ ಶಾಸಕರಿಗೆ ಮೊದಲಿನಿಂದಲೂ ಬಿಜೆಪಿ ಗಾಳ ಹಾಕಿತ್ತು. ಅದನ್ನು ಹೊರತು ಪಡಿಸಿ ಸರಕಾರ ರಚಿಸುವಷ್ಟು ಸಂಖ್ಯೆಯಲ್ಲಿ ಬಿಜೆಪಿಗೆ ಯಾರು ಹೋಗಲಾರರು. 16 ಭಿನ್ನಮತಿಯ ಶಾಸಕರು ಬಿಜೆಪಿಗೆ ಹೋಗಲಿದ್ದಾರೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದರು.

ಹೈಕಮಾಂಡ್ ಸೂಚನೆಯಂತೆ ಬೆಂಗಳೂರಿಗೆ ಹೋಗುತ್ತಿದ್ದೇನೆ. ನಮ್ಮ ನಾಯಕರು ಆಪರೇಷನ್ ಕಮಲದ ವಿರುದ್ಧ ಯಾವ ಯೋಜನೆಗಳನ್ನು ರೂಪಿಸಿದ್ದಾರೆ ಎಂಬುದು ಗೊತ್ತಿಲ್ಲ. ಬಿಜೆಪಿಯ ತಂತ್ರಕ್ಕೆ ಪ್ರತಿ ತಂತ್ರ ರೂಪಿಸಲು ಸಿದ್ಧವಾಗಿದ್ದಾರೆ, ಹೈಕಮಾಂಡ್‌ನ ಆದೇಶವನ್ನು ಪಾಲಿಸಲಿದ್ದೇನೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News