ಜ.17: ಉಡುಪಿಯಲ್ಲಿ ರೈತ ಸಮಾವೇಶ

Update: 2019-01-15 16:10 GMT

ಉಡುಪಿ, ಜ.15:ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಫೆ.3ರಂದು ನಡೆಯಲಿರುವ ‘ರೈತ ಸಮಾವೇಶ-2019’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜ.17ರ  ಸಂಜೆ 4 ಗಂಟೆಗೆ ಉಡುಪಿ ರೆಸಿಡೆನ್ಸಿ ಹೋಟೆಲ್‌ನ ರೂಪ್‌ಟಾಪ್ ಸಭಾಂಗಣದಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಉದ್ಯಮಿ ಗ್ರೆಗರಿ ಮಥಾಯಸ್ ಇನ್ನಂಜೆ ಬಿಡುಗಡೆ ಗೊಳಿಸಲಿದ್ದಾರೆ. ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ಕೃಷಿಕ ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News