ಜ.23 ರಂದು ಯುವ ಬರಹಗಾರರ ಕೃತಿಗಳ ಬಿಡುಗಡೆ

Update: 2019-01-15 16:46 GMT

ಬೆಂಗಳೂರು, ಜ.15: ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಜ.23 ರಂದು ಬೆಳಗ್ಗೆ 11ಕ್ಕೆ ನಯನ ರಂಗಮಂದಿರದಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿಗಳ ಬಿಡುಗಡೆ-2017 ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಸಮಾರಂಭದಲ್ಲಿ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ ಮತ್ತು ವಿಕ್ರಮ ವಿಸಾಜಿ ಅವರು ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದು, ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಅಧ್ಯಕ್ಷತೆ ವಹಿಸಲಿದ್ದಾರೆ. 2017ರಲ್ಲಿ ಯುವ ಬರಹಗಾರರು ರಚಿಸಿದ 50 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News