ಶಿವಮೊಗ್ಗ: ಅಕ್ರಮ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ

Update: 2019-01-15 17:01 GMT

ಶಿವಮೊಗ್ಗ, ಜ. 15: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಕಾನೂನುಬಾಹಿರವಾಗಿ ದಾಸ್ತಾನು ಮಾಡಿದ್ದ ಮರಳು ಅಡ್ಡೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದಿರುವ ಘಟನೆ ವರದಿಯಾಗಿದೆ. 

ಕೋಣಂದೂರು ಸಮೀಪದ ಮಜ್ಜಿಗೆಹೊಳೆ ಪಾತ್ರದ ಜಂಬೆ ಹಾಲಮ್ಮ ಜಡ್ಡು ಪ್ರದೇಶದಲ್ಲಿ 50 ಟಿಪ್ಪರ್ ಲಾರಿಯಷ್ಟು ಮರಳು, ಮಂಡಗಳಲೆ ಸಮೀಪದ ಆಡುಗೋಡಿಯಲ್ಲಿ 15 ಟ್ರ್ಯಾಕ್ಟರ್ ಲೋಡ್‍ನಷ್ಟು ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ವಶಕ್ಕೆ ಪಡೆದ ಮರಳಿನ ಮೌಲ್ಯ ಸುಮಾರು 5.60 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News