ಸಿದ್ಧಗಂಗಾ ಸ್ವಾಮೀಜಿ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರ

Update: 2019-01-16 05:31 GMT

ತುಮಕೂರು, ಜ.16: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರನ್ನು ಅವರ ಅಪೇಕ್ಷೆಯಂತೆ ಇಂದು ಮುಂಜಾವ ಸಿದ್ಧಗಂಗಾ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿದೆ.

‘‘ಸ್ವಾಮೀಜಿಯವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಸ್ಥಿರವಾಗಿದೆ. ಸೋಂಕು ಕಡಿಮೆಯಾಗಿದೆ. ಇನ್ನೆರಡು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಕರೆತರಲು ಉದ್ದೇಶಿಸಲಾಗಿತ್ತು. ಆದರೆ ಸ್ವಾಮೀಜಿ ನಿನ್ನೆ ರಾತ್ರಿಯೇ ಮಠಕ್ಕೆ ಹಿಂದಿರುಗುವ ಇಂಗಿತ ವ್ಯಕ್ತಪಡಿಸಿದ್ದರಿಂದ ಇಂದು ಬೆಳಗ್ಗೆ ಅವರನ್ನು ಮಠಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ, ಸ್ವಾಮೀಜಿಯ ಆಪ್ತ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

‘‘ಸ್ವಾಮೀಜಿಯ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಉಸಿರಾಟದ ಸಮಸ್ಯೆ ಬಿಟ್ಟರೆ ಅವರ ಆರೋಗ್ಯ ಸ್ಥಿರವಾಗಿದೆ. ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗಸ್ವಾಮೀಜಿ ನಿರ್ದೇಶನದಂತೆ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ’’ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News