ಪ್ರತಿಭಟನೆ ಹಿನ್ನೆಲೆ: ಬಿಎಸ್‌ವೈ ಮನೆಗೆ ಹೆಚ್ಚಿನ ಭದ್ರತೆ

Update: 2019-01-16 14:44 GMT

ಬೆಂಗಳೂರು, ಜ.16: ಬಿಜೆಪಿ ಪಕ್ಷ ಆಪರೇಷನ್ ಕಮಲ ಮಾಡಲು ಹೊರಟಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಲ್ಲೇಶ್ವರಂ ಶಾಸಕ ಡಾ. ಸಿ.ಎಸ್.ಅಶ್ವತ್ಥ ನಾರಾಯಣ ಅವರ ನಿವಾಸ ಮತ್ತು ಕಚೇರಿಗಳಿಗೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಾಸಕ ಅಶ್ವತ್ಥನಾರಾಯಣ ಅವರ ಸದಾಶಿವನಗರದ ಆರ್‌ಎಂವಿ ಬಡಾವಣೆ ಯಲ್ಲಿರುವ ಮನೆ ಹಾಗೂ ಮಲ್ಲೇಶ್ವರದ 14ನೇ ಮುಖ್ಯರಸ್ತೆಯಲ್ಲಿರುವ ಗೃಹ ಕಚೇರಿಗೆ ಎಸಿಪಿ ನೇತತ್ವದಲ್ಲಿ ಇಬ್ಬರು ಇನ್ಸ್‌ಪೆಕ್ಟರ್‌ಗಳು, ಮೂವರು ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ 50 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಡಾಲರ್ಸ್ ಕಾಲನಿಯಲ್ಲಿರುವ ಬಿ.ಎಸ್.ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಹೆಚ್ಚುವರಿಯಾಗಿ 10 ಪೊಲೀಸರನ್ನು ನಿಯೋಜಿಸಿ ಸೂಕ್ತ ಭದ್ರತೆ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News