ಧನಂಜಯ್ ಕುಮಾರ್ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್
Update: 2019-01-16 16:40 GMT
ಮಂಗಳೂರು, ಜ.16: ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್ನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಆಸ್ಪತ್ರೆಗೆ ತೆರಳಿ ಧನಂಜಯ ಕುಮಾರ್ ಅವರ ಆರೋಗ್ಯವನ್ನು ವಿಚಾರಿಸಿದರು.
ವಿ.ಧನಂಜಯ್ ಕುಮಾರ್ ಕಳೆದ ಐದು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದರು ಎನ್ನಲಾಗಿದ್ದು, ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಿ.ಧನಂಜಯ್ ಕುಮಾರ್ ಅವರನ್ನು ಕೆಲ ತಿಂಗಳುಗಳಿಂದ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿದ್ದ ವಿ.ಧನಂಜಯ ಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಜೆಪಿಯಲ್ಲಿ ರಾಜಕೀಯ ಜೀವನ ಆರಂಭಿಸಿದ ಧನಂಜಯ್ ಕುಮಾರ್, ಶಾಸಕರಾಗಿ, ಸಂಸದರಾಗಿ, ಆಯ್ಕೆಯಾಗಿದ್ದರು. ಕೇಂದ್ರ ಸರಕಾರದಲ್ಲೂ ಸಚಿವರಾಗಿ ಕೆಲಸ ಮಾಡಿದ್ದರು.