ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ: ಕೇಂದ್ರ ಸಚಿವ ರಮೇಶ್ ಜಿಗಜಿಣಗಿ‌

Update: 2019-01-16 17:00 GMT

ವಿಜಯಪುರ,ಜ.16: ಆಪರೇಷನ್ ಕಮಲದ ಬಗ್ಗೆ ಮಾಹಿತಿಯಿಲ್ಲ. ಆಡಳಿತ ಪಕ್ಷದವರೇ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ‌ ರಮೇಶ್ ಜಿಗಜೀಣಗಿ, ಸಮ್ಮಿಶ್ರ ಸರಕಾರದಲ್ಲಿ ಎಲ್ಲವೂ ಸರಿಯಿಲ್ಲ. ಅವರ ದಡ್ಡತನವನ್ನು ಮುಚ್ಚಿಹಾಕಲು ನಮ್ಮ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ನಮ್ಮ ಚುನಾವಣೆಯೇ ನಮಗೆ ಮುಖ್ಯ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ಬಗ್ಗೆ ನಾನು ಹೆಚ್ಚಿನ ಗಮನ ಹರಿಸಿದ್ದೇನೆ. ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಬಿಜೆಪಿ ಸರಕಾರ ರಚನೆ ಬಗ್ಗೆ ಮಾಹಿತಿಯಿಲ್ಲ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ರಾಜ್ಯಕ್ಕೆ ವಾಪಸ್ ಬಂದಿದ್ದೇನೆ. ಬಿಜೆಪಿ ನಾಯಕರ ಸಭೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಬಗ್ಗೆ, ಹಾಗೂ ಚುನಾವಣೆ ಬಗ್ಗೆ ಚರ್ಚೆ ನಡೆಯಿತು. ಅದರ ಹೊರತಾಗಿ ಬೇರೆ ಯಾವುದೇ ಚರ್ಚೆ ನಡೆದಿಲ್ಲ‌ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News