ಮಾಯಾವತಿ ಪ್ರಧಾನಿಯಾಗಬೇಕೆಂಬುದು ನಮ್ಮ ಉದ್ದೇಶ: ಶಾಸಕ ಎನ್.ಮಹೇಶ್

Update: 2019-01-16 17:27 GMT

ಮೈಸೂರು,ಜ.16: ಬಿಎಸ್ಪಿ ನಾಯಕಿಯಾಗಿರುವ ಮಾಯಾವತಿಯವರು ಪ್ರಧಾನಿಯಾಗಬೇಕೆಂಬುದು ನಮ್ಮ ಉದ್ದೇಶ. ಆದ್ದರಿಂದ ಅಖಿಲೇಶ್ ಯಾದವ್ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ, ಶಾಸಕ ಎನ್.ಮಹೇಶ್ ಹೇಳಿದರು.

ಬಿಎಸ್ಪಿ ನಾಯಕಿ ಮಾಯಾವತಿ ಅವರ 63ನೇ ಹುಟ್ಟುಹಬ್ಬದ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಜನಕಲ್ಯಾಣ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಈ ಹೊಂದಾಣಿಕೆ ಉತ್ತರ ಪ್ರದೇಶದ ಸುತ್ತಮುತ್ತಲಿನ 9 ರಾಜ್ಯಗಳ ಮೇಲೆ ಪ್ರಭಾವ ಬೀರಲಿದೆ. ಜನಸಾಮಾನ್ಯರ ಅಭಿವೃದ್ಧಿಯೇ ಮಾಯಾವತಿಯವರ ಮೂಲಮಂತ್ರವಾಗಿದ್ದು, ರಾಜ್ಯದಿಂದ ಲೋಕಸಭಾ ಸದಸ್ಯರನ್ನು ಆರಿಸಿ ಕಳುಹಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಈ ಸಂದರ್ಭ ರಾಜ್ಯಸಭೆ ಸದಸ್ಯ ಡಾ.ಅಶೋಕ್ ಕುಮಾರ್, ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಪ್ರಭುಸ್ವಾಮಿ, ನಗರ ಘಟಕದ ಅಧ್ಯಕ್ಷ ಬಸವರಾಜು, ಪಾಲಿಕೆಯ ಸದಸ್ಯೆ ಬೇಗಂ ಪಲ್ಲವಿ, ಮುಖಂಡರಾದ ಗಂಗಾಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News