ಸಿದ್ದಗಂಗಾ ಸ್ವಾಮೀಜಿಯ ಆರೋಗ್ಯ ಸ್ಥಿರ, ಆತಂಕ ಬೇಡ: ವೈದ್ಯರ ಹೇಳಿಕೆ

Update: 2019-01-17 07:28 GMT

ತುಮಕೂರು, ಜ.17: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕಳೆದ ರಾತ್ರಿ ಒಂದಿಷ್ಟು ಏರುಪೇರು ಕಂಡುಬಂದಿತ್ತು. ಆದರೆ ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಿದ್ಧಗಂಗಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ, ಸ್ವಾಮೀಜಿಯ ಆಪ್ತ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ.

ಕಳೆದ ರಾತ್ರಿ ಸ್ವಾಮೀಜಿಯ ರಕ್ತದೊತ್ತಡ ಏರಿಕೆಯಾಗಿತ್ತು. ಆದರೆ ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಜನತೆ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಶಿವಕುಮಾರ ಸ್ವಾಮೀಜಿಯ ಆರೋಗ್ಯ ಸ್ಥಿರವಾಗಿದೆ. ಆದರೆ ಸೋಂಕು ತಗಲುವ ಸಾಧ್ಯತೆಯಿರುವ ಕಾರಣಕ್ಕೆ ಸ್ವಾಮೀಜಿಯ ಭೇಟಿಗೆ ಭಕ್ತರಿಗೆ ಅವಕಾಶ ನೀಡಲಾಗದು. ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಕಿರಿಯ ಸ್ವಾಮೀಜಿಯೊಂದಿಗೆ ಯಡಿಯೂರಪ್ಪ ಮಾತುಕತೆ ನಡೆಸಿದರು. ಅವರು ಸಂಜೆಯ ತನಕ ಮಠದಲ್ಲೇ ಉಳಿದುಕೊಳ್ಳುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News