ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್ ಯಡಿಯೂರಪ್ಪ

Update: 2019-01-17 16:57 GMT

ತುಮಕೂರು, ಜ.17: ನಗರದ ಸಿದ್ದಗಂಗಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭೇಟಿ ನೀಡಿ ತ್ರಿವಿಧ ದಾಸೋಹಮೂರ್ತಿ, ಕಾಯಕಯೋಗಿ, ನಡೆದಾಡುವ ದೇವರು ಎಂದೇ ಖ್ಯಾತರಾದ ಸಿದ್ದಗಂಗಾ ಮಠಾಧ್ಯಕ್ಷ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯವನ್ನು ವಿಚಾರಿಸಿದರು. 

ಶ್ರೀಗಳು ಚಿಕಿತ್ಸೆ ಪಡೆಯುತ್ತಿರುವ ಶ್ರೀಕ್ಷೇತ್ರದ ಹಳೇಮಠದ ಕೊಠಡಿಗೆ ಶಾಸಕ ಎಸ್.ಸುರೇಶ್ ಕುಮಾರ್, ಬಿ.ವೈ.ವಿಜಯೇಂದ್ರರವರೊಂದಿಗೆ ಆಗಮಿಸಿದ ಯಡಿಯೂರಪ್ಪನವರು ಶ್ರೀಗಳ ದರ್ಶನ ಪಡೆದು ಖುದ್ಧ ಆರೋಗ್ಯವನ್ನು ವಿಚಾರಿಸಿದರು. ಹಳೇ ಮಠದ ಕೊಠಡಿಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಸಿದ್ದಗಂಗಾ ಆಸ್ಪತ್ರೆಯ ವೈದ್ಯರು, ಕಿರಿಯ ಶ್ರೀಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಶ್ರೀಗಳ ಆರೋಗ್ಯ, ಅವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಮಾಹಿತಿ ಪಡೆದು ಸುದೀರ್ಘವಾಗಿ ಚರ್ಚೆ ನಡೆಸಿದರು. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಡೆದಾಡುವ ದೇವರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ದರ್ಶನ ಮಾಡಿ ಬಂದಿದ್ದೇವೆ. ಆಸ್ಪತ್ರೆಯಲ್ಲಿ ನೀಡಬೇಕಾದ ಚಿಕಿತ್ಸೆಯನ್ನೆ ಮಠದಲ್ಲೂ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯದಲ್ಲಿ ನಿರೀಕ್ಷೆ ಮಟ್ಟಕ್ಕೆ ಚೇತರಿಕೆ ಕಂಡು ಬಂದಿಲ್ಲ. ಅವರ ಆರೋಗ್ಯ ಸುಧಾರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News