ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಗೃಹ ಸಚಿವ ಪಾಟೀಲ್

Update: 2019-01-17 17:16 GMT

ತುಮಕೂರು, ಜ.17: ಸಿದ್ದಗಂಗಾ ಮಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯವನ್ನು ಗೃಹ ಸಚಿವ ಎಂ.ಬಿ. ಪಾಟೀಲ್ ವಿಚಾರಿಸಿದರು. 

ಇಲ್ಲಿನ ಸಿದ್ದಗಂಗಾ ಕ್ಷೇತ್ರದ ಹಳೇ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಭೇಟಿ ಮಾಡಿದ ಸಚಿವ ಎಂ.ಬಿ. ಪಾಟೀಲ್ ಅವರು ಶ್ರೀಗಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, ನಮ್ಮೆಲ್ಲರ ಪಾಲಿನ ನಡೆದಾಡುವ ದೇವರ ಆರೋಗ್ಯವನ್ನು ವಿಚಾರಿಸಲು ಬಂದಿದ್ದೇನೆ. ಶ್ರೀಗಳ ಆರೋಗ್ಯ ಕುರಿತು ವೈದ್ಯರೊಂದಿಗೂ ಚರ್ಚೆ ನಡೆಸಿದ್ದೇನೆ. ಶ್ರೀಗಳ ಎಲ್ಲಾ ಪ್ಯಾರಾಮೀಟರ್ಸ್ ಚೆನ್ನಾಗಿವೆ. ಶ್ರೀಗಳಿಗೆ ಸೋಂಕು ಹರಡದಂತೆ ವೈದ್ಯರು ಎಚ್ಚರಿಕೆ ವಹಿಸಿದ್ದಾರೆ. ಶ್ರೀಗಳು ಇನ್ನೂ ಹತ್ತಾರು ವರ್ಷಗಳ ಕಾಲ ನಾಡಿನ ಜನತೆಗೆ ಆಶೀರ್ವಾದ ಮಾಡಬೇಕು ಎಂಬುದು ನಮ್ಮೆಲ್ಲರ ಬಯಕೆಯಾಗಿದೆ. ಅವರ ಆರೋಗ್ಯ ವೃದ್ಧಿಯಾಗಲೆಂದು ಬಸವಣ್ಣನಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News