ಹುಬ್ಬಳ್ಳಿ: 'ಆಪರೇಷನ್ ಕಮಲ' ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Update: 2019-01-17 18:08 GMT

ಹುಬ್ಬಳ್ಳಿ,ಜ.17: ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಆಪರೇಷನ್ ಕಮಲದ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿಯವರು ಶಾಸಕರನ್ನು ಗಾಳಹಾಕುವ ಮೂಲಕ ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದಾರೆಂದು ಆರೋಪಿಸಿದರು. ಬಿಜೆಪಿ ಮುಖಂಡರು, ರಾಷ್ಟ್ರೀಯ ನಾಯಕರು ಹಾಗೂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಿಜೆಪಿಯವರು ಇಂತಹ ಕೆಟ್ಟ ಸಂಸ್ಕೃತಿಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಐ.ಜಿ.ಸನದಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಅನ್ವರ್ ಮುಧೋಳ, ಮುಖಂಡರಾದ ಸದಾನಂದ ಡಂಗನವರ್, ಮೆಹಬೂಬ ಕೋಳೂರ, ಬಶೀರ ಗುಡಮಾಲ, ಇಮ್ರಾನ್ ಯಲಿಗಾರ, ಶಾರುಖ್ ಮುಲ್ಲಾ, ನವೀದ ಮುಲ್ಲಾ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News