ಶಿವಮೊಗ್ಗ: ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

Update: 2019-01-18 14:19 GMT

ಶಿವಮೊಗ್ಗ, ಜ. 18: ವ್ಯಕ್ತಿಯೋರ್ವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ನಗರದ ಕೆಳಗಿನ ತುಂಗಾನಗರ ಬಡಾವಣೆಯಲ್ಲಿ ನಡೆದಿದೆ. 

ಕಲ್ಲು ಕೆತ್ತನೆ ವೃತ್ತಿಯ ಕಮಾರ್ (30) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುಜರಿ ಅಂಗಡಿಯೊಂದರ ಹಿಂಭಾಗ ಈ ಘಟನೆ ನಡೆದಿದೆ. ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪರಾರಿ: ಕೊಲೆಗೀಡಾದ ಕುಮಾರ್ ಕೆಳಗಿನ ತುಂಗಾ ನಗರ ಬಡಾವಣೆಯ ನಿವಾಸಿಯಾಗಿದ್ದಾರೆ. ಹತ್ಯೆಯ ನಂತರ ಹಂತಕರು ಪರಾರಿಯಾಗಿದ್ದಾರೆ. ಹತ್ಯೆ ನಡೆಸಿದವರು ಯಾರು? ಕಾರಣವೇನು? ಎಂಬುವುದು ಸ್ಪಷ್ಟವಾಗಿಲ್ಲ. ಆದರೆ ಅವರಿಗೆ ಪರಿಚಯವಿದ್ದವರೇ, ಮದ್ಯದ ನಶೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆಗಳು ವ್ಯಕ್ತವಾಗಿವೆ. 

ತುಂಗಾನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಹಂತಕರ ಬಂಧನದ ನಂತರವಷ್ಟೆ ಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದು ಬರಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News