ಯಡಿಯೂರಪ್ಪ ನುಡಿದಂತೆ ನಡೆಯಲಿ : ಸಿದ್ದರಾಮಯ್ಯ
Update: 2019-01-19 05:29 GMT
ಬೆಂಗಳೂರು, ಜ.19: 'ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಭಯ ಬೇಡ' ಎಂದಿರುವ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿದ್ದ ಬಿಜೆಪಿ ಶಾಸಕರನ್ನು ಕರೆಸಿಕೊಂಡು ರಾಜ್ಯದ ಬರನಿರ್ವಹಣೆಯ ಸಮೀಕ್ಷೆಗೆ ಕಳುಹಿಸುವ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.