ಸಮಾಜದ ಒಳಿತು ಬಯಸುವುದೇ ಎಲ್ಲ ಶರಣದ ಸಂದೇಶವಾಗಿದೆ: ಡಾ.ತಿಪ್ಪೇರುದ್ರಪ್ಪ

Update: 2019-01-19 12:32 GMT

ಚಿಕ್ಕಮಗಳೂರು, ಜ.19: ಶರಣರ ಬಗ್ಗೆ ಮಾತನಾಡುವುದೆಂದರೆ ಶರಣರ ಪೂಜೆ ಮಾಡಿದಂತೆ ಎಂದು ಸಾಹಿತಿ ಬಿ.ತಿಪ್ಪೇರುದ್ರಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತದ ವತಿಯಿಂದ ಶನಿವಾರ ನಗರದ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಿದ್ದ ಶಿವಯೋಗಿ ಶ್ರೀ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಹಾಗೂ ನಿಜಶರಣರ ಅಂಬಿಗರ ಚೌಡಯ್ಯ ಜಯಂತಿಯ ಕಾರ್ಯಕ್ರಮದಲ್ಲಿ  ಶಿವಯೋಗಿ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡಿದ ಅವರು, 12ನೇ ಶತಮಾನ ಮಹಾಶರಣ ಶ್ರೀ ಸಿದ್ದರಾಮೇಶ್ವರ ಸಮಾಜದ ಒಳಿತಿಗಾಗಿ ಬದುಕಿದ ನಿಜವಾದ ಕಾಯಕ ಯೋಗಿದ್ದಾರೆ. ಹೀಗಾಗಿ  ಜಾತಿ, ಮತ, ಪಂಥಗಳೆನ್ನದೆ ಶ್ರೀ ಶಿವಯೋಗಿ ಸಿದ್ಧರಾಮೆಶ್ವರ ಜಯಂತಿಯನ್ನು ಎಲ್ಲರೂ ಆಚರಿಸಬೇಕು. 900 ವರ್ಷಗಳ ನಂತರ ಸಿದ್ಧರಾಮೇಶ್ವರರನ್ನು ನೆನೆಯುತ್ತಿರುವ ಇಂದಿನ  ನಮ್ಮ ಸಮಾಜ ತನ್ನನ್ನು ತಾನು ಅರಿತು ಬದುಕಬೇಕಿದೆ ಎಂದು ತಿಳಿಸಿದರು.

ತನ್ನನ್ನು ತಾನು ಅರಿತು ಬಾಳಿದ ಶ್ರೀ ಸಿದ್ಧರಾಮೇಶ್ವರರು ಕೆರೆ, ಕಾಲುವೆ, ದೇವಸ್ಥಾನ ಕಟ್ಟಿಸುವ ಮೂಲಕ ಕರ್ಮ ಮಾರ್ಗದಲ್ಲಿ ಸಾಗಿ ಮಾನವ ಜನ್ಮ ಸಾರ್ಥಕ ಎಂದು  ನಿರೂಪಿಸಿದ್ದಾರೆ. ನಂತರದ ದಿನಗಳಲ್ಲೂ ಬಸವಣ್ಣ ಮತ್ತು ಸಾವಿರಾರು ಶರಣರ ಭೇಟಿಯಿಂದ ಜ್ಞಾನ ಮಾರ್ಗದಲ್ಲಿ ಸಾಗಿದರೂ ಆ ಮೂಲಕ ಸಕಲ ಜೀವಾತ್ಮಗಳಿಗೂ ಒಳಿತನ್ನು ಬಯಸುವ ಹೃದಯದವರು ಶ್ರೀ ಸಿದ್ಧರಾಮೇಶ್ವರರು ಎಂದು ಬಣ್ಣಿಸಿದರು.

ಸಿದ್ಧರಾಮೇಶ್ವರರ ವಚನಗಳು ಸಮಾಜದಲ್ಲಿರುವ ಸಕಲ ಜೀವಿಗಳಿಗೂ ಒಳಿತನ್ನು  ಬಯಸುವುದಾಗಿದೆ. ಬದುಕು ಶ್ರೇಷ್ಠವಾಗಬೇಕಾದರೆ ದುಡಿಮೆಯನ್ನು ಪೂಜಿಸಬೇಕು. ದುಡಿಮೆಯಲ್ಲಿ ಭಗವಂತನನ್ನು ಕಾಣಬೇಕು ಎಂದು ತಿಳಿಸುತ್ತವೆ. ಹಿಗಾಗೀ ಪ್ರತಿಯೊಬ್ಬರು ಸೋಮಾರಿಗಳಗಾದೆ ದುಡಿಮೆಗೆ ಪ್ರಾಮುಖ್ಯತೆ ನೀಡಬೇಕೆಂದು ಕಿವಿ ಮಾತು ಹೇಳಿದರು.

ಮನುಷ್ಯ ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಲ್ಲ ಎಂಬುದನ್ನು ಅವರು 12ನೇ ಶತಮಾನದಲ್ಲಿಯೇ ತೋರಿಸಿಕೊಟ್ಟಿದ್ದಾರೆ. ಅವರನ್ನು ಸ್ಫೂರ್ತಿಯನ್ನಾಗಿಸಿಕೊಂಡು ಇಂದಿನ ಯುವ ಪೀಳಿಗೆ ಸಾಧನೆಯ ಶಿಖರವನ್ನೇರಬೇಕು ಎಂದು ತಿಳಿಸಿದರು.

ಮಹಾಯೋಗಿ ವೇಮನರ ಕುರಿತು ಉಪನ್ಯಾಸ ನೀಡಿದ ಸಾಹಿತಿ ಬೆಳವಾಡಿ ಮಂಜುನಾಥ್, 15ನೇ ಶತಮಾನದ ತೆಲಗು ಕವಿಗಳಲ್ಲಿ ವೇಮನರು ಪ್ರಮುಖರು. ಕನ್ನಡದ ಸರ್ವಜ್ಞ, ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ಮಹಾ ಕವಿ, ಮಹಾಯೋಗಿಯಾಗಿದ್ದಾರೆ ಎಂದ ಅವರು ಸಮಾಜದಲ್ಲಿನ ವೈರುದ್ಯಗಳನ್ನು ತಮ್ಮ ವಚನದಲ್ಲಿ ತಿಳಿಸಿದ್ದಾರೆ ಎಂದರು.

ನಿಜಶರಣ ಅಂಬಿಗರ ಚೌಡಯ್ಯ ರವರ ಕುರಿತು ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಿ ಮಾತನಾಡಿ, 12ನೇಯ ಶತಮಾನದ ಬಸವಣ್ಣನವರ ಕಾಲದ ಒಬ್ಬ  ವಚನಕಾರ ವೃತ್ತಿಯಲ್ಲಿ ಅಂಬಿಗ ಪ್ರವೃತ್ತಿಯಲ್ಲಿ ಅನುಭವಿ. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವ, ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈ ವಚನಗಳ  ಅಂಕಿತವಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಶಿಲ್ಪರಾಜಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ದಲಿತ ಮುಖಂಡ ರಾಧಾಕೃಷ್ಣ ಸೇರಿದಂತೆ  ಸಮುದಾಯದ ಮುಖಂಡರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News