ಜ.20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2019-01-19 14:09 GMT

ಉಡುಪಿ, ಜ.19: ಬಿಜೆಪಿ ಉಡುಪಿ ನಗರ ಹಾಗೂ ಅಂಬಲಪಾಡಿ ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಸಹಯೋಗದೊಂದಿಗೆ ಪೌರ ಕಾರ್ಮಿಕರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ.20ರಂದು ಬೆಳಗ್ಗೆ 8:30ರಿಂದ ಮಧ್ಯಾಹ್ನ 12:30ರವರೆಗೆ ಹನುಮಂತ ನಗರದ ಕುದ್ಮಲ್ ರಂಗರಾವ್ ನಗರದಲ್ಲಿ ಆಯೋಜಿಸಲಾಗಿದೆ.

ಶಿಬಿರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಸಂಸದೆ ಶೋಭಾ ಕರಂದ್ಲಾಜೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಭಾಗ ವಹಿಸಲಿರುವರು ಎಂದು ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಾವೂದ್ ಅಬೂಬಕ್ಕರ್, ಮಂಜುನಾಥ್ ಮಣಿಪಾಲ, ರಾಘವೇಂದ್ರ ಕಿಣಿ, ಡಾ.ಶ್ರೀನಿವಾಸ ರಾವ್, ಚಂದ್ರಶೇಖರ್ ಪ್ರಭು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News