ಶಿವಮೊಗ್ಗ: ಪತ್ರಕರ್ತ ಖುರೇಶಿ ನಿಧನ

Update: 2019-01-19 14:17 GMT

ಶಿವಮೊಗ್ಗ, ಜ.19: ಶಿವಮೊಗ್ಗ ಜಿಲ್ಲಾ ಪತ್ರಿಕೋದ್ಯಮದಲ್ಲಿ ಕ್ರಿಯಾಶೀಲರಾಗಿದ್ದ ರಿಪ್ಪನ್‌ಪೇಟೆಯ ಆರ್.ಎಸ್.ಖುರೇಶಿ(48) ಆನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ಸೂಚಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಬೆಳವಣಿಗೆಗಳಾದರೂ ಸಹ, ಅತ್ಯಂತ ಕ್ಷಿಪ್ರವಾಗಿ ಸುದ್ದಿಯನ್ನು ಸಂಗ್ರಹಿಸಿ, ರವಾನಿಸುತ್ತಿದ್ದ ಖುರೇಶಿ, ಈ ಕ್ರಿಯಾಶೀಲತೆಯಿಂದಾಗಿಯೇ ಜಿಲ್ಲಾ ಪತ್ರಿಕೋದ್ಯಮದಲ್ಲಿ ಕ್ರಿಯಾಶೀಲ ಪತ್ರಕರ್ತ ಎಂದೇ ಜನ ಸಾಮಾನ್ಯರು ಹಾಗೂ ಓದುಗರಿಂದಲೂ ಗುರುತಿಸಲ್ಪಟ್ಟಿದ್ದರು.

ಸಮಾಜ ಸೇವೆಯಲ್ಲಿ ತಮ್ಮನ್ನು ಅಷ್ಟೇ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಅವರು, ವಿಶೇಷವಾಗಿ ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ ನೆರೆವೇರಿಸುವಲ್ಲಿ ಕಳೆದ 25 ವರ್ಷಗಳಿಂದ ಕಾರ್ಯೋನ್ಮುಖರಾಗಿದ್ದರು. ಹೀಗಾಗಿ ಅವರು, ಪತ್ರಿಕೋದ್ಯಮದ ಜೊತೆ ಜೊತೆಯಲ್ಲಿಯೇ ಸಾಮಾನ್ಯರಿಗೂ ಹತ್ತಿರದವರಾಗಿದ್ದರು. ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖುರೇಶಿ ಅವರು ಚಿಕಿತ್ಸಾ ವೆಚ್ಚಕ್ಕಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆರ್ಥಿಕ ನೆರವನ್ನೂ ಸಹ ನೀಡಲಾಗಿತ್ತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ವಿ.ಶಿವಕುಮಾರ್, ಉಪಾಧ್ಯಕ್ಷ ಎಂ. ನಿಂಗನಗೌಡ, ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ಸದಸ್ಯ ಎನ್.ರವಿಕುಮಾರ್ ಹಾಗೂ ನಗರ ಕಾರ್ಯದರ್ಶಿ ವಿ. ಟಿ. ಅರುಣ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News