ಉಡುಪಿ ಎಸಿಬಿ ಡಿವೈಎಸ್ಪಿ ದಿನಕರ ಶೆಟ್ಟಿ ವರ್ಗಾವಣೆ
Update: 2019-01-19 15:00 GMT
ಉಡುಪಿ, ಜ.19: ಭ್ರಷ್ಟಾಚಾರ ನಿಗ್ರಹ ದಳದ ಉಡುಪಿ ಪೊಲೀಸ್ ಉಪಾಧೀಕ್ಷಕ ದಿನಕರ ಶೆಟ್ಟಿ ಅವರನ್ನು ಪುತ್ತೂರು ಉಪವಿಭಾಗಕ್ಕೆ ವರ್ಗಾವಣೆ ಗೊಳಿಸಿ ಸರಕಾರ ಆದೇಶ ನೀಡಿದೆ.
ಈ ಪ್ರಯುಕ್ತ ಅವರಿಗೆ ಉಡುಪಿಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಠಾಣೆಯಲ್ಲಿ ಬಿಳ್ಕೂಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಅಧ್ಯಕ್ಷ್ಷತೆ ಯನ್ನು ಭ್ರಷ್ಟಾಚಾರ ನಿಗ್ರಹ ದಳ ಮಂಗಳೂರು ಪಶ್ಚಿಮ ವಲಯದ ಐಜಿಪಿ ಶ್ರುತಿ ಎನ್.ಎಸ್. ವಹಿಸಿದ್ದರು.
ಉಡುಪಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಟಿ.ಆರ್.ಜೈಶಂಕರ್, ಎಸಿಬಿ ಪೊಲೀಸ್ ನಿರೀಕ್ಷಕರಾದ ಬಿ.ಎಸ್.ಸತೀಶ್ ಹಾಗೂ ಜಯರಾಮ ಡಿ.ಗೌಡ ಮೊದಲಾದವರು ಉಪಸ್ಥಿತರಿದ್ದರು.