ಸಹಕಾರಿ ಗ್ರಂಥಾಲಯ-ವಸ್ತು ಸಂಗ್ರಹಾಲಯ ಉದ್ಘಾಟನೆ

Update: 2019-01-19 15:07 GMT

ಮಂಗಳೂರು, ಜ.19: ಎಸ್‌ಡಿಸಿಸಿ ಬ್ಯಾಂಕ್‌ನ ಹಳೇ ಕಟ್ಟಡದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಹಕಾರಿ ಗ್ರಂಥಾಲಯ ಮತ್ತು ವಸ್ತು ಸಂಗ್ರಹಾಲಯವನ್ನು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಉದ್ಘಾಟಿಸಿದರು.

ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಧ್ಯಕ್ಷರಾಗಿ ಸಾರ್ಥಕ ಸೇವೆಯ ರಜತೋತ್ಸವ ಹಾಗೂ ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಅಂಗವಾಗಿ ಈ ಗ್ರಂಥಾಲಯ, ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗಿದೆ.

ವಸ್ತು ಸಂಗ್ರಹಾಲಯವನ್ನು ವೀಕ್ಷಣೆ ಮಾಡಿದ ಸಚಿವ ಡಿ.ವಿ. ಸದಾನಂದ ಗೌಡ ಮತ್ತು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಗ್ರಹಾಲಯ ಪ್ರವೇಶದ ಎಡಭಾಗಕ್ಕೆ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಾಧನೆಗೆ ಕೈಗನ್ನಡಿಯಾದ ಪ್ರಶಸ್ತಿಗಳು, ಲಕಗಳು, ಅಭಿನಂದನಾ ಪತ್ರಗಳಿವೆ. ಎದುರು ಭಾಗದಲ್ಲಿ ಸಹಕಾರಿ ಸಾಧಕರ ಭಾವಚಿತ್ರಗಳು, ಬಲಭಾಗದಲ್ಲಿ ಸಹಕಾರಿ ರಂಗಕ್ಕೆ ಸಂಬಂಧಿಸಿ ಕೃತಿಗಳು ಪ್ರದರ್ಶನಕ್ಕಿಡಲಾಗಿದೆ.

ಈ ಸಂದರ್ಭ ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶ ಮತ್ತು ಡಾ.ಎಂ.ಎನ್. ರಾಜೇಂದ್ರ ಕುಮಾರ್ ರಜತ ಸಂಭ್ರಮ ಅಭಿನಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ, ಸ್ಕಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಕೆಎಂಎ್ ನಿರ್ದೇಶಕ ಕಾಪು ದಿವಾಕರ್ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಜನರಲ್ ಮೆನೇಜರ್ ಗೋಪಿನಾಥ್ ಭಟ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News