ಮಡಿಕೇರಿ: ಬೈಕ್‍ಗೆ ಲಾರಿ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

Update: 2019-01-19 16:22 GMT

ಮಡಿಕೇರಿ, ಜ.19: ನಗರದ ಮೈಸೂರು ರಸ್ತೆಯಲ್ಲಿ ವಾಹನವೊಂದನ್ನು ಹಿಂದಿಕ್ಕುವ ಹಂತದಲ್ಲಿ ಲಾರಿಯೊಂದು ಬೈಕ್‍ಗೆ ಡಿಕ್ಕಿಯಾಗಿ, ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ನಡೆದಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ.

ಸ್ಥಳೀಯ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಭರತ್ ಎಂಬಾತ ತನ್ನ ಬೈಕ್‍ನಲ್ಲಿ ಕಾರ್ಯ ನಿಮಿತ್ತ ಜನರಲ್ ತಿಮ್ಮಯ್ಯ ವೃತ್ತದಿಂದ ಸುದರ್ಶನ ವೃತ್ತದ ಕಡೆ ತೆರಳುತ್ತಿದ್ದ. ಈ ಸಂದರ್ಭ ಡಿಪೋ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಶಾಂತಿ ಚರ್ಚ್ ಮುಂದಿನ ಹೆದ್ದಾರಿಯಲ್ಲಿ ಬೇರೊಂದು ವಾಹನವನ್ನು ಹಿಂದಿಕ್ಕುವ ಸಂದರ್ಭ ಎದುರಿಗೆ ಬಂದ ಬೈಕ್‍ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಈ ಅಪಘಾತದಿಂದ ಬೈಕ್ ಸವಾರ ಭರತ್ ಬಲಗಾಲಿನ ತೊಡೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು, ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.  ನಗರ ಠಾಣಾ ಸಂಚಾರಿ ಪೊಲೀಸರು, ಸ್ಥಳ ಮಹಜರು ನಡೆಸಿ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News