ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರ ಹತ್ಯೆ

Update: 2019-01-20 14:35 GMT

ಬೆಳಗಾವಿ, ಜ.20: ಬೆಳಗಾಕಿನ ಮಾರಿಹಾಳ ಗ್ರಾಮದಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಕೊಲೆಗೈದಿರುವ ಘಟನೆ ರವಿವಾರ ನಡೆದಿದೆ ಎಂದು ವರದಿಯಾಗಿದೆ.

ಮಾರಿಹಾಳ ಗ್ರಾಮದ ಪತ್ತರೇಪ್ಪ ಮಲ್ಲನವರ (36), ಬಸವರಾಜ (23) ಕೊಲೆಯಾದವರು ಎಂದು ತಿಳಿದುಬಂದಿದೆ.

ರವಿವಾರ ಮುಂಜಾನೆ ಮನೆಯಿಂದ ಜಮೀನತ್ತ ಹೊರಟಿದ್ದಾಗ ಹೊಲದ ಬಳಿಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ.

ಸ್ಥಳೀಯರೊಬ್ಬರು ಹೊಲದ ಬಳಿ ಶವಗಳನ್ನು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೊಲೆಗೆ ಈವರೆಗೂ ನಿಖರವಾದ ಕಾರಣ ಗೊತ್ತಾಗಿಲ್ಲ. ಆದರೂ ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಜೋಡಿ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳಗಾವಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News