ಎಟಿಎಂನಿಂದ ಹಣ ಕಳವಿಗೆ ವಿಫಲ ಯತ್ನ

Update: 2019-01-20 18:15 GMT

ಬೆಂಗಳೂರು, ಜ.20: ಎಟಿಎಂ ಕೇಂದ್ರದಿಂದ ಹಣ ಕಳವು ಮಾಡಲು ಯತ್ನಿಸಿರುವ ಘಟನೆ ಇಲ್ಲಿನ ವಸಂತನಗರದ ಮಿಲರ್ಸ್ ರಸ್ತೆಯಲ್ಲಿ ನಡೆದಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸೇರಿದ ಎಟಿಎಂನಲ್ಲಿ ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಎಟಿಎಂನ ಡಿಜಿಟಲ್ ಲಾಕ್ ಸಿಸ್ಟಮ್ ಒಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಪ್ರಯತ್ನ ವಿಫಲವಾದ ಕಾರಣ ಪರಾರಿಯಾಗಿದ್ದು, ಈ ಸಂಬಂಧ ಪಂಜಾಬ್ ನ್ಯಾಷನಲ್ ಬ್ಯಾಂಕ್ ವ್ಯವಸ್ಥಾಪಕ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News