ಶಿವಕುಮಾರ ಸ್ವಾಮೀಜಿ ನಿಧನ: ನಾಳೆ ರಾಜ್ಯಾದ್ಯಂತ ಸರಕಾರಿ ರಜೆ

Update: 2019-01-21 12:17 GMT

ಬೆಂಗಳೂರು, ಜ. 21: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ನಿಧನದ ಹಿನ್ನೆಲೆಯಲ್ಲಿ ನಾಳೆ(ಜ.22ರ ಮಂಗಳವಾರ) ಮೃತರ ಗೌರವಾರ್ಥ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಜ.21ರಿಂದ ಜ.23ರ ವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು.

ಡಾ.ಶಿವಕುಮಾರ ಸ್ವಾಮೀಜಿಯವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನಾಳೆ(ಜ.22)ರ ನೆರವೇರಿಸಲಾಗುತ್ತದೆ ಎಂದು ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಶಿಷ್ಟಾಚಾರ) ಸೋಮವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News