ಕಾರವಾರ: ಸಮುದ್ರದಲ್ಲಿ ಮುಳುಗಿದ ದೋಣಿ; 8 ಮಂದಿ ಮೃತ್ಯು

Update: 2019-01-21 13:15 GMT

ಕಾರವಾರ, ಜ. 21: ಕೂರ್ಮಗಡ ಜಾತ್ರೆಗೆ ತೆರಳಿದ್ದ ದೋಣಿ ಸಮುದ್ರದಲ್ಲಿ ಮುಳುಗಿ 8 ಮಂದಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. 

ದೋಣಿಯಲ್ಲಿ ಸುಮಾರು 22 ಮಂದಿ ಇದ್ದರು ಎನ್ನಲಾಗಿದ್ದು, ಅವರು ಕೂರ್ಮಗಡ ಜಾತ್ರೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಮೀನುಗಾರರು ಶೋಧಕಾರ್ಯ ನಡೆಸುತ್ತಿದ್ದಾರೆ.

 ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗು ಜಿಲ್ಲಾಧಿಕಾರಿ ನಕುಲ್​ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News